ಗೋಣಿಕೊಪ್ಪಲು, ನ. 6: ಕೊಡವ ಐರಿ ಸಮಾಜದ ವಾರ್ಷಿಕ ಮಹಾಸಭೆ ಅಧ್ಯಕ್ಷ ಮೇಲತ್ತಂಡ ಎ.ರಮೇಶ್ ಅಧ್ಯಕ್ಷತೆಯಲ್ಲಿ ತಾ.19 ರಂದು ಮೂರ್ನಾಡು ಗೌಡ ಸಮಾಜದಲ್ಲಿ ನಡೆಯಲಿರುವದಾಗಿ ಕಾರ್ಯದರ್ಶಿ ಕಾಮೆಯಂಡ ಗಣೇಶ್ ತಿಳಿಸಿದ್ದಾರೆ.

10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವದು. ಈ ಬಗ್ಗೆ ಅಂಕಪಟ್ಟಿಯೊಂದಿಗೆ ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದ್ದಾರೆ.

ತಾ. 19 ರಂದು ಬೆಳಿಗ್ಗೆ 10.30 ಗಂಟೆಗೆ ಮಹಾಸಭೆ ಆರಂಭ ವಾಗಲಿದ್ದು ಸಭೆಯ ಕಾರ್ಯ ಕಲಾಪಗಳೊಂದಿಗೆ ಐರಿ ಸಮಾಜದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವದು ಎಂದು ತಿಳಿಸಿದ್ದಾರೆ.