ಸುಂಟಿಕೊಪ್ಪ, ನ. 5: ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರದ ವಿಶೇಷ ಪ್ಯಾಕೇಜ್‍ನ ಅಡಿಯಲ್ಲಿ 30 ಲಕ್ಷ ರೂ ಬಿಡುಗಡೆಯಾಗಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ಕೆದಕಲ್, ಹಾಲೇರಿ- ಕಾಂಡನಕೊಲ್ಲಿ, ಮಕ್ಕಂದೂರು ಸಂಪರ್ಕ ರಸ್ತೆ ಸೇರಿದಂತೆ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೇರವೇರಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ.ಚಂದ್ರಕಲಾ, ಗ್ರಾ.ಪಂ.ಅಧ್ಯಕ್ಷರಾದ ಬಾಲಕೃಷ್ಣ ರೈ, ಸದಸ್ಯರುಗಳಾದ ವೆಂಕಪ್ಪ ಕೋಟ್ಯಾನ್, ರಮೇಶ್, ದೇವಿಪ್ರಸಾದ್, ಮಾಜಿ ಅಧ್ಯಕ್ಷ ಸೋಮಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೀಣಾ, ಕೆದಕಲ್ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ರಮೇಶ್ ರೈ, ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಸದಸ್ಯರುಗಳಾದ ಶಿವಮ್ಮ, ನಾಗರತ್ನ ಸುರೇಶ್, ಲೋಕೋಪಯೋಗಿ ಅಭಿಯಂತರ ಪೀಟರ್, ಗುತ್ತಿಗೆದಾರ ಸುರೇಶ್ ಕುಮಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.