ಸೋಮವಾರಪೇಟೆ, ನ. 8: ಟಿಪ್ಪು ಜಯಂತಿ ಹಿನ್ನೆಲೆ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಸೋಮವಾರಪೇಟೆ ಪಟ್ಟಣದಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್‍ನ ಸಿಬ್ಬಂದಿಗಳು ಹಾಗೂ ಸ್ಥಳೀಯ ಠಾಣಾ ಪೊಲೀಸರು ಪಥ ಸಂಚಲನ ನಡೆಸಿದರು.

ಇಲ್ಲಿನ ಮಡಿಕೇರಿ ರಸ್ತೆಯಿಂದ ಸಿ.ಕೆ. ಸುಬ್ಬಯ್ಯ ರಸ್ತೆ, ಬಸ್ ನಿಲ್ದಾಣ, ಮಹಾತ್ಮಾ ಗಾಂಧೀಜಿ ವೃತ್ತ, ಬಸವೇಶ್ವರ ರಸ್ತೆ, ಮುಖ್ಯ ರಸ್ತೆ, ಜೇಸೀ ವೇದಿಕೆ ಮುಂಭಾಗದಿಂದ ಹೊರಟ ಸಮವಸ್ತ್ರಧಾರಿಗಳಾಗಿದ್ದ ಸಿಬ್ಬಂದಿಗಳು ಶಸ್ತ್ರಸಜ್ಜಿತರಾಗಿ ಪಥ ಸಂಚಲನ ನಡೆಸಿದರು.

ಸೋಮವಾರಪೇಟೆ ಡಿವೈಎಸ್‍ಪಿ ಸಂಪತ್‍ಕುಮಾರ್, ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಣ್ಣ ಸೇರಿದಂತೆ ನೂರಕ್ಕೂ ಅಧಿಕ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಕುಶಾಲನಗರ ಹಾಗೂ ಕೂಡಿಗೆಯಲ್ಲಿಯೂ ಪಥ ಸಂಚಲನ ನಡೆಯಿತು.