ಮಡಿಕೇರಿ, ನ. 8: ಕೊಡವ ಮಕ್ಕಡ ಕೂಟ ಹಾಗೂ ಅಜ್ಜಿಕುಟ್ಟಿರ ಕುಟುಂಬದ ಆಶ್ರಯದಲ್ಲಿ ತಾ. 11 ರಂದು ‘ಮಾವೀರ ಅಚ್ಚುನಾಯಕ’ ಪುಸ್ತಕ ಬಿಡುಗಡೆ ಹಾಗೂ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವ ಕಾರ್ಯಕ್ರಮ ನಡೆಯಲಿದೆ.

ವೀರಾಜಪೇಟೆ ತಾಲೂಕಿನ ಚಿಕ್ಕಮಂಡೂರು ಗ್ರಾಮದ ಅಜ್ಜಿಕುಟ್ಟಿರ ಐನ್‍ಮನೆಯಲ್ಲಿ ಅಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಕಾಡ್ಯಮಾಡ ರೀಟಾ ಬೋಪಯ್ಯ ಬರೆದಿರುವ ‘ಮಾವೀರ ಅಚ್ಚು ನಾಯಕ’ ಪುಸ್ತಕವನ್ನು ಬಿಡುಗಡೆಗೊಳಿಸಲಾಗುವದು. ಅಜ್ಜಿಕುಟ್ಟಿರ ಕುಟುಂಬದ ಪಟ್ಟೆದಾರ ಅಜ್ಜಿಕುಟ್ಟಿರ ಬಿ. ಭೀಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಫಿ ಬೆಳೆಗಾರ ಅಜ್ಜಿಕುಟ್ಟಿರ ಸಿ. ಪೂಣಚ್ಚ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ. ಕುಟುಂಬದ ಹಿರಿಯ ಅಜ್ಜಿಕುಟ್ಟಿರ ಚಿಟ್ಟಿಯಪ್ಪ, ಲೇಖಕಿ ಕಾಡ್ಯಮಾಡ ರೀಟಾ ಬೋಪಯ್ಯ, ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಭಾಗವಹಿಸುತ್ತಾರೆ ಎಂದು ಕೊಡವ ಮಕ್ಕಡ ಕೂಟದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.