ಸಿದ್ದಾಪುರ, ನ. 9: ರಾಜ್ಯ ಸರಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಮುಖ್ಯ ವಾಹಿನಿಗೆ ಬರಬೇಕೆಂದು ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ರಾಜ್ಯ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ ಕರೆ ನೀಡಿದರು.

ಸಿದ್ದಾಪುರದ ಮುನವಿರುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆದ ಅಭಿನಂದನ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಕಾಂಗ್ರೆಸ್ ಸರಕಾರ ಎಲ್ಲಾ ವರ್ಗದವರಿಗೂ ಸಮಾನವಾಗಿ ಯೋಜನೆಗಳನ್ನು ನೀಡುತ್ತಿದ್ದು ಇಂತಹ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದ ಅವರು ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಸ್ಲಿಂ ಜಮಾಅತ್ ಅಧ್ಯಕ್ಷÀ ಉಸ್ಮಾನ್ ಹಾಜಿ ಅಧ್ಯಕ್ಷತೆಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ರಾಜ್ಯ ಅಲ್ಪಸಂಖ್ಯಾತರ ಉಪಾಧ್ಯಕ್ಷರಾಗಿ ಅಯ್ಕೆಯಾಗಿರುವ ಪಿ.ಸಿ. ಹಸೈನಾರ್ ಹಾಜಿಗೆ ಸನ್ಮಾನ ಮಾಡಿದರು.

ಈ ಸಂದರ್ಭ ಮಸೀದಿಯ ಖತೀಬ್ ನೌಫಲ್ ಉದವಿ, ಜಮಾಅತ್ ಪ್ರಮುಖರಾದ ಮುಸ್ತಫ ಹಾಜಿ, ರವೂಫ್ ಹಾಜಿ, ಸೌಕತ್ ಹಾಜಿ, ಉಮ್ಮರ್ ಹಾಜಿ, ಅಹಮ್ಮದ್ ಕುಟ್ಟಿ ಹಾಜಿ, ಮಹಮ್ಮದಾಲಿ ಸೇರಿದಂತೆ ಗ್ರಾಮದ ಮುಸ್ಲಿಂ ಭಾಂದವರು ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು.