ನಾಪೋಕ್ಲು, ನ. 12: ನೆಲಜಿ ಅಂಬಲ ಮಹಿಳಾ ಸಮಾಜದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಬಲ್ಲಮಾವಟಿ ಗ್ರಾüಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಸೀಮಿತವಾಗಿ ತಾ. 14 ರಂದು ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಕ್ರೀಡಾ ಪೈಪೋಟಿಯನ್ನು ಏರ್ಪಡಿಸಲಾಗಿದೆ. ಅಪರಾಹ್ನ 3.30 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಸಮಾಜದ ಅಧ್ಯಕ್ಷೆ ಮಣವಟ್ಟೀರ ಕಮಲಾ ಬೆಳ್ಳಿಯಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಭಾರತೀಯ ಕಾಫಿ ಮಂಡಳಿ ಉಪಾಧ್ಯಕ್ಷೆ ಪಟ್ಟಡ ರೀನಾ ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಕಾಫಿ ಬೆಳೆಗಾರರಾದ ಮಂಡೀರ ಸರೋಜ ದೇವಯ್ಯ, ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮುಕ್ಕಾಟಿರ ದೇಚಮ್ಮ ವಿನಯ್, ನೆಲಜಿ ಅಂಬಲ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾಳೆಯಂಡ ರತಿ ಪೊನ್ನಣ್ಣ, ಕಾಫಿ ಬೆಳೆಗಾರರಾದ ಚೀಯಕಪೂವಂಡ ದೇವಮ್ಮಾಜಿ ಚೆಟ್ಟಿಯಪ್ಪ ,ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪಾಲ್ಗೊಳ್ಳಲಿದ್ದಾರೆ.