ಸಿದ್ದಾಪುರ, ನ. 12: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಎಂ.ಜಿ. ಕಾಲೋನಿಯ ವಿವಿಧ ರಸ್ತೆ ಕಾಮಗಾರಿಗೆ ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು.

ನೆಲ್ಲಿಹುದಿಕೇರಿಯ ಗ್ರಾಮದ ಎಂ.ಜಿ. ರಸ್ತೆಯಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಜಿ.ಪಂ. ಅನುದಾನದಿಂದ ರೂ. 5.75 ಲಕ್ಷ ವೆಚ್ಚದಲ್ಲಿ ನೂತನ ಕಾಮಗಾರಿಗೆ ಚಾಲನೆ ನೀಡಲಾಯಿತು.

ಈ ಸಂದರ್ಭ ತಾ.ಪಂ. ಸದಸ್ಯೆ ಸುಹದಾ, ಗ್ರಾ.ಪಂ. ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಸಫಿಯ, ಗ್ರಾ.ಪಂ. ಸದಸ್ಯರುಗಳಾದ ಶುಕುರ್, ಎ.ಕೆ. ಹಕೀಂ, ಹನೀಫ್, ಇಂದಿರಾ, ಕಾಂಗ್ರೆಸ್ ಮುಖಂಡರಾದ ಮುಸ್ತಫಾ, ಅಲವಿ, ಹಂಸ, ಮತ್ತಿತರರು ಹಾಜರಿದ್ದರು.