ಸೋಮವಾರಪೇಟೆ, ನ. 14: ಇಲ್ಲಿನ ಕಕ್ಕೆಹೊಳೆ ಜಂಕ್ಷನ್‍ನಲ್ಲಿರುವ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಟಿಪ್ಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಮಹಾನ್ ನಾಯಕರ ಜನ್ಮ ದಿನಾಚರಣೆಯಂತೆ ಟಿಪ್ಪು ಜಯಂತಿ ಯನ್ನೂ ಸರ್ಕಾರ ಆಚರಣೆಗೆ ತಂದಿದ್ದು, ಬಿಜೆಪಿಯವರು ವಿನಾಕಾರಣ ವಿರೋಧಿಸುತ್ತಿರುವದು ಸರಿಯಲ್ಲ.

ಕೊಡಗಿನಲ್ಲಿ ಬಿಜೆಪಿ ಶಾಸಕರು ಶಾಂತಿ ಭಂಗದ ಮೂಲಕ ಮತ ಪಡೆಯುವ ಯತ್ನ ನಡೆಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿ.ಎ. ಲಾರೆನ್ಸ್, ಉಪಾಧ್ಯಕ್ಷ ಹೆಚ್.ಎ. ನಾಗರಾಜ್, ಹಿಂದುಳಿದ ಘಟಕ ಜಿಲ್ಲಾ ಉಪಾಧ್ಯಕ್ಷ ಮೋಹನ್, ಯುವ ಕಾಂಗ್ರೆಸ್ ಕ್ಷೇತ್ರ ಅಧ್ಯಕ್ಷ ಮಿಥುನ್, ರಾಹುಲ್‍ಗಾಂಧಿ ಬ್ರಿಗೇಡ್‍ನ ಅಧ್ಯಕ್ಷ ಚೇತನ್, ಕಾರ್ಯದರ್ಶಿ ಎಸ್.ಕೆ. ವಿನಿ, ತಾ.ಪಂ. ಸದಸ್ಯ ಬಿ.ಬಿ. ಸತೀಶ್, ಚೌಡ್ಲು ಗ್ರಾ.ಪಂ. ಸದಸ್ಯ ದೇವಿಪ್ರಸಾದ್, ಪದಾಧಿಕಾರಿಗಳಾದ ಪ್ರಕಾಶ್, ದರ್ಶನ್ ಅವರುಗಳು ಭಾಗವಹಿಸಿದ್ದರು.