ಸೋಮವಾರಪೇಟೆ,ನ.14: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ. 15ರಂದು (ಇಂದು) ಪೂರ್ವಾಹ್ನ 10 ಗಂಟೆಗೆ ಇಲ್ಲಿನ ಮಹಿಳಾ ಸಮಾಜದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕøತಿಕ ಸ್ಪರ್ಧೆ ಮತ್ತು ಪುಸ್ತಕ ಕೊಡುಗೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಲಿದ್ದು, ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲ ಕೆ.ಇ. ಐಪು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಕಸಾಪ ಕೋಶಾಧಿಕಾರಿ ಎಸ್.ಎ. ಮುರಳೀಧರ್, ಜಿಲ್ಲಾ ಸಮಿತಿ ಸದಸ್ಯ ಪ್ರಸನ್ನ, ಸುಮಾ ಸುದೀಪ್ ಭಾಗವಹಿಸಲಿದ್ದಾರೆ. ಅಪರಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಅಧ್ಯಾಪಕ ವೆಂಕಟನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ಉದ್ಯಮಿ ಬಿ.ಎಸ್. ಸುಂದರ್, ಪ್ರಾಂಶುಪಾಲ ಲೋಕೇಶ್, ಕಸಾಪ ನಿಕಟಪೂರ್ವ ಅಧ್ಯಕ್ಷ ಜವರಪ್ಪ, ನಿರ್ದೇಶಕ ಕವನ್ ಕಾರ್ಯಪ್ಪ ಭಾಗವಹಿಸಲಿದ್ದಾರೆ.

ವಿವಿಧ ವಿಭಾಗಗಳಲ್ಲಿ ಸಾಂಸ್ಕøತಿಕ ಸ್ಪರ್ಧೆ ನಡೆಯಲಿದ್ದು, ಇದರೊಂದಿಗೆ ಜಿಲ್ಲಾ ಕಸಾಪದಿಂದ ಪುಸ್ತಕ ವಿತರಣೆ ಮಾಡಲಾಗುವದು ಎಂದು ಪ್ರಕಟಣೆ ತಿಳಿಸಿದೆ.