ಕುಶಾಲನಗರ, ನ. 15: ಕಾರ್ತಿಕ ಮಾಸದ ಕೊನೆಯ ಸೋಮವಾರದ ಅಂಗವಾಗಿ ಕುಶಾಲನಗರ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದೀಪೋತ್ಸವ ಕಾರ್ಯಕ್ರಮ ನಡೆಯಿತು. ಆರ್ಯವೈಶ್ಯ ಬಾಂಧವರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆವರಣದಲ್ಲಿ ದೀಪಗಳನ್ನು ಹಚ್ಚಿ ಶ್ರದ್ದಾಭಕ್ತಿಯಿಂದ ಆಚರಿಸಿದರು. ದೇವಾಲಯ ಅರ್ಚಕರಾದ ಪ್ರಸನ್ನ ಗಾಂವ್ಕರ್ ಪೂಜಾ ವಿಧಿ ನೆರವೇರಿಸಿದರು.

ಈ ಸಂದರ್ಭ ಆರ್ಯವೈಶ ಮಹಾಸಭಾದ ಜಿಲ್ಲಾಧ್ಯಕ್ಷ ಬಿ.ಆರ್.ನಾಗೇಂದ್ರಪ್ರಸಾದ್, ಕುಶಾಲನಗರ ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ವಾಸವಿ ಯುವಜನ ಸಂಘದ ಅಧ್ಯಕ್ಷ ವಿ.ಆರ್. ಮಂಜುನಾಥ್, ಮಹಿಳಾ ಮಂಡಳಿ ಅಧ್ಯಕ್ಷೆ ಆಶಾ ಅಶೋಕ್, ಯುವತಿಯರ ಸಂಘದ ಅಧ್ಯಕ್ಷೆ ಕುಸುಮ ರಾಜ್ ಮತ್ತಿತರರು ಇದ್ದರು.