ಸೋಮವಾರಪೇಟೆ, ನ. 15: ರಾಜ್ಯ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸುವ ಉದ್ದೇಶದೊಂದಿಗೆ ಪ್ರಾರಂಭವಾಗಿರುವ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಸೋಮವಾರಪೇಟೆ ಪಟ್ಟಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ನೇತೃತ್ವದಲ್ಲಿ ಪಕ್ಷದ ಮುಖಂಡರು ಮನೆಮನೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಇರುವ ಕರಪತ್ರ, ಕಿರುಹೊತ್ತಿಗೆಯನ್ನು ನೀಡಿದರು. ತಾ.ಪಂ. ಸದಸ್ಯ ಸತೀಶ್, ಯುವ ಕಾಂಗ್ರೆಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಮಿಥುನ್, ಪ.ಪಂ. ಸದಸ್ಯರುಗಳಾದ ಶೀಲಾ ಡಿಸೋಜ, ಮೀನಾ ಕುಮಾರಿ, ನಾಮನಿರ್ದೇಶಿತ ಸದಸ್ಯರಾದ ಇಂದ್ರೇಶ್, ಹೆತ್ತೂರು ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿ.ಎ. ಲಾರೆನ್ಸ್, ಉಪಾಧ್ಯಕ್ಷ ಹೆಚ್.ಎ. ನಾಗರಾಜ್, ರಕ್ಷಾ ಸಮಿತಿ ಸದಸ್ಯ ಮೋಹನ್ ಸೇರಿದಂತೆ ಇತರರು ಅಭಿಯಾನದಲ್ಲಿ ಭಾಗವಹಿಸಿದ್ದರು.