ಸೋಮವಾರಪೇಟೆ,ನ.16: ರಾಜ್ಯ ಬಾಲ ಭವನ ಸೊಸೈಟಿ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಕಲಾಶ್ರೀ ಶಿಬಿರದಲ್ಲಿ ಭಾಗವಹಿಸಿದ ಸೋಮವಾರಪೇಟೆಯ ಎಂ.ಯು. ಶ್ರಾವಣಿ, ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇಲ್ಲಿನ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಂ.ಯು. ಶ್ರಾವಣಿ, ಸೃಜನಾತ್ಮಕ ಬರವಣಿಗೆ (ಕಥೆ, ಕವನ, ಪ್ರಬಂಧ) ಕ್ಷೇತ್ರದಲ್ಲಿ ಹೊಂದಿರುವ ಅಪ್ರತಿಮ ಪ್ರತಿಭೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ರಾಜ್ಯಮಟ್ಟದ ಕಲಾಶ್ರೀ ಆಯ್ಕೆ ಶಿಬಿರದಲ್ಲಿ ತೋರಿದ ಉತ್ತಮ ಪ್ರದರ್ಶನದಿಂದಾಗಿ ರಾಷ್ಟ್ರಮಟ್ಟದ ಶಿಬಿರಕ್ಕೂ ಆಯ್ಕೆಯಾಗಿರುವ ಈಕೆ, ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದ ಎಂ.ಈ. ಉದಯಕುಮಾರ್ ಮತ್ತು ಕೆ.ಸಿ. ಲತಾ ದಂಪತಿಯ ಪುತ್ರಿ.