ನಾಪೆÇೀಕ್ಲು, ನ. 17: ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಅಧ್ಯಕ್ಷರಾಗಿದ್ದ ದಿ. ಮೇಕೇರಿರ ಕಾರ್ಯಪ್ಪ ಸ್ಮರಣಾರ್ಥ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ ಶಾಲಾ ಆವರಣದಲ್ಲಿ ತಾ. 28 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಪತ್ರೀ ಶಾಲೆಯಿಂದ ಪ್ರೌಢಶಾಲಾ ವಿಭಾಗದ ನಾಲ್ಕು ವಿದ್ಯಾರ್ಥಿಗಳನ್ನೊಳಗೊಂಡ ಒಂದು ತಂಡವು ಭಾಗವಹಿಸಬಹುದಾಗಿದೆ. ತಮ್ಮ ಶಾಲೆಯ ಹೆಸರು ನೋಂದಾಯಿಸಿಕೊಳ್ಳಲು ತಾ. 25 ಕೊನೆಯ ದಿನವಾಗಿದೆ. ಸ್ಪರ್ಧೆಯ ದಿನ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ವಿಜೇತರಿಗೆ ಪ್ರಥಮ ರೂ. 10,000, ದ್ವಿತೀಯ ರೂ. 7,500 ಹಾಗೂ ತೃತೀಯ ರೂ. 5,000 ಬಹುಮಾನದ ಮೊತ್ತವಾಗಿರುತ್ತದೆ. ಬಹುಮಾನ ಹೊದವಾಡ ರಫೆಲ್ಸ್ ಇಂಟರ್‍ನ್ಯಾಶನಲ್ ಕಾಲೇಜಿನ ಪ್ರಾಯೋಜಕತ್ವದಲ್ಲಿ ನೀಡಲಾಗುತ್ತದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.