ಮಡಿಕೇರಿ, ನ. 18: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಬೆಸೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೊಡ್ಲಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕೊಡ್ಲಿಪೇಟೆ ವ್ಯವಸಾಯೋತ್ಪನ್ನ ಮಾರಾಟ ಮತ್ತು ಪರಿವರ್ತನ ಸಹಕಾರ ಸಂಘ, ಹಂಡ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಂಯುಕ್ತ ಆಶ್ರಯದಲ್ಲಿ ತಾ. 19 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಬೆಸೂರು ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ 64ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಅವಕಾಶ ವಂಚಿತ ಮತ್ತು ಆರ್ಥಿಕ ಅಬಲ ವರ್ಗದವರಿಗಾಗಿ ಸಹಕಾರಿ ಸಂಸ್ಥೆಗಳು ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಎ.ಕೆ. ಮನುಮುತ್ತಪ್ಪ ಉದ್ಘಾಟಿಸಲಿದ್ದಾರೆ. ರೂಪ ಮತ್ತು ಸಂಗಡಿಗರಿಂದ ಪ್ರಾರ್ಥನೆ, ಬೆಸೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಆರ್. ಪುರುಷೋತ್ತವi,, ಕೊಡ್ಲಿಪೇಟೆ ಕ್ಷೇತ್ರದ ಜಿ.ಪಂ.ಸದಸ್ಯ ಸಿ.ಪಿ.ಪುಟ್ಟರಾಜು ಇತರರು ಪಾಲ್ಗೊಳ್ಳಲಿದ್ದಾರೆ.