ಕುಶಾಲನಗರ, ನ. 17: ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ ಕಾವೇರುತ್ತಿದ್ದು, ಶುಕ್ರವಾರ ಕುಶಾಲನಗರ ಹೋಬಳಿ ಮುಸ್ಲಿಂ ಒಕ್ಕೂಟದ ಪ್ರಮುಖರು ಸರದಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಕುಶಾಲನಗರದ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ತೆರಳಿದ ಪ್ರತಿಭಟನಾಕಾರರು ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಮಾನವ ಸರಪಳಿ ರಚಿಸಿ ಸ್ವಲ್ಪಕಾಲ ರಸ್ತೆ ತಡೆ ನಡೆಸಿದರು.

ಹೋರಾಟ ಸಮಿತಿಯ ಅಧ್ಯಕ್ಷರಾದ ವಿ.ಪಿ.ಶಶಿಧರ್, ಒಕ್ಕೂಟದ ಅಧ್ಯಕ್ಷ ಪಿ.ಕೆ.ಅಬ್ದುಲ್ ಕರೀಂ, ಅಹಿಂದ ಒಕ್ಕೂಟದ ಅಧ್ಯಕ್ಷ ಎಂ.ಕೆ.ಹಮೀದ್ ಮತ್ತಿತರರು ಈ ಸಂದರ್ಭ ಮಾತನಾಡಿದರು.

ಸ್ಥಳೀಯ ಜಾಮಿಯ ಮಸೀದಿ, ಹಿಲಾಲ್ ಮಸೀದಿ, ತಕ್ವ ಮಸೀದಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ 16 ಮಸೀದಿಗಳ ಪ್ರಮುಖರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.