ಮಡಿಕೇರಿ, ನ. 17: ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್-2017ರ ಮಾಹೆಯಲ್ಲಿ ನಡೆಸಲು ಉದ್ದೇಶಿಸಿರುವ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿಯ ಕಾರ್ಯಕ್ರಮವನ್ನು ತಾ. 20 ರಿಂದ 29 ರವರೆಗೆ ಮಡಿಕೇರಿಯಲ್ಲಿ ಆಯೋಜಿಸಲಾಗಿದೆ.

ಪರೀಕ್ಷಾ ಪೂರ್ವ ತರಬೇತಿಯಲ್ಲಿ ಈ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ನಿಗದಿಪಡಿಸಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ಗುಣಮಟ್ಟದ ತರಬೇತಿಯನ್ನು ನೀಡಲಾಗುವದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಅಥವಾ ಅಂಚೆ ಕಾರ್ಡಿನ ಮುಖಾಂತರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಸಿ. ಜಗನ್ನಾಥ್ ತಿಳಿಸಿದ್ದಾರೆ.