ಮೂರ್ನಾಡು, ನ. 19: ಇಲ್ಲಿಗೆ ಸಮೀಪದ ಪಾರಾಣೆ ಬಿಸಿಎಂ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಸರಕಾರದಿಂದ ದೊರಕುವ ಉಚಿತ ಸಮವಸ್ತ್ರ ವಿತರಿಸ ಲಾಯಿತು.ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ನೆಲ್ಲಚಂಡ ಕಿರಣ್ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಿದರು. ಬಳಿಕ ಮಾತನಾಡಿದ ಅವರು ಸರ್ಕಾರ ಶಿಕ್ಷಣಕ್ಕೆ ಇಂದು ಅನೇಕ ಉಪಯುಕ್ತ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳನ್ನು ಸೂಕ್ತ ರೀತಿಯಲ್ಲಿ ಉಪಯೋಗ ಪಡಿಸಿಕೊಳ್ಳುವ ದರೊಂದಿಗೆ ಶಾಲೆಗೆ ಉತ್ತಮ ಫಲಿತಾಂಶವನ್ನು ಗಳಿಸಿ ಕೊಡಬೇಕು ಎಂದರು.

ಪಾರಾಣೆ ಪ್ರೌಢಶಾಲೆಯ ಅಧ್ಯಕ್ಷ ಪೆಬ್ಬಾಟಂಡ ಎ. ಪೆಮ್ಮಯ್ಯ, ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು ಮಾತನಾಡಿದರು. ಪಾರಾಣೆ ಪ್ರೌಢಶಾಲೆ ಕಾರ್ಯದರ್ಶಿ ಮುಕ್ಕಾಟಿರ ಬಿ. ಕುಶಾಲಪ್ಪ, ಶಾಲಾ ಮುಖ್ಯ ಶಿಕ್ಷಕಿ ಎ.ಜಿ. ರಜಿನಿ, ಸಹ ಶಿಕ್ಷಕರು ಉಪಸ್ಥಿತರಿದ್ದರು.