ಶನಿವಾರಸಂತೆ, ನ. 19: ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಯುವ ಘಟಕ, ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ತಾಲೂಕು ಯುವ ಘಟಕದ ಅಧ್ಯಕ್ಷ ಪ್ರಾನ್ಸಿಸ್ ಡಿಸೋಜ ನೇತೃತ್ವದಲ್ಲಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಯಿತು.

ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಹಾಗೂ ಆಹಾರ ಸುರಕ್ಷಿತಾಧಿಕಾರಿ ನವೀನ್ ಅವರಿಗೆ ಮನವಿ ಪತ್ರ ಅರ್ಪಿಸಲಾಯಿತು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಹೋಬಳಿ ಯುವ ಘಟಕದ ಅಧ್ಯಕ್ಷ ಆನಂದ್ ಹಾಗೂ ಸದಸ್ಯರುಗಳು ಪಾಲ್ಗೊಂಡಿದ್ದರು.