ಸುಂಟಿಕೊಪ್ಪ, ನ. 19: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ಹೋಬಳಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ನವಜೀವನ ಸಮಿತಿ ಆಶ್ರಯದಲ್ಲಿ ಪಾನಮುಕ್ತ ಸದಸ್ಯರ ಮಾಸಿಕ ಸಮಲೋಚನಾ ಸಭೆಯು ನಡೆಯಿತು.

ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಭಟ್ ಅಧ್ಯಕ್ಷತೆ ವಹಿಸಿದ್ದರು. ಸುಂಟಿಕೊಪ್ಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇತ್ತೀಚೆಗೆ 1137ನೇ ಮದ್ಯವರ್ಜನ ಶಿಬಿರ ಏರ್ಪಡಿಸಲಾಗಿತ್ತು. ಈ ಸಂಬಂಧ ಮದ್ಯಮುಕ್ತ ಸದಸ್ಯರ ಮಾಸಿಕ ಸಭೆಯನ್ನು ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಯಿತು.

ಸೋಮವಾರಪೇಟೆ ತಾಲೂಕು ಶ್ರೀ ಕ್ಷೇತ್ರ ಯೋಜನೆಯ ಮೇಲ್ವಿಚಾರಕ ರಮೇಶ್, ಶಿಬಿರದ ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷೆ ಪುಷ್ಪ, ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಸರಸ್ವತಿ, ಸೇವಾ ಪ್ರತಿನಿಧಿಗಳಾದ ಮಾಲಿನಿ, ಕುಸುಮಾ, ನಿರ್ಮಲಾ, ಶಿವಕುಮಾರ್, ಚಿತ್ರಾ ಹಾಗೂ ನವಜೀವನ ಸಮಿತಿ ಸದಸ್ಯರು ಇದ್ದರು.