ಕುಶಾಲನಗರ, ನ. 19: ಕೊಡಗು ಜಿಲ್ಲಾ ಕರ್ನಾಟಕ ಕಾವಲು ಪಡೆಯ 7ನೇ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು.ಸ್ಥಳೀಯ ಅನುಗ್ರಹ ಪಿ.ಯು. ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಉದ್ಘಾಟಿಸಿದರು. ಕಾವಲು ಪಡೆ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಸೋಮವಾರಪೇಟೆ ಹಿರಿಯ ಕಾರ್ಮಿಕ ನಿರೀಕ್ಷಕ ಮಹದೇವ ಸ್ವಾಮಿ, ವೀರಾಜಪೇಟೆ ಶಿಕ್ಷಕಿ ಎ.ಪಿ. ಸಾವಿತ್ರಿ, ಉಪನ್ಯಾಸಕಿ ಕ್ಲಾರಾ ರೇಷ್ಮ, ದೀಕ್ಷಾ ಅವರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಅನುಗ್ರಹ ಪಿಯು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್.ಕೆ. ಸತೀಶ್, ಪ್ರಾಂಶುಪಾಲ ಪಂಡರಿನಾಥ ನಾಯ್ಡು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಬಾರವಿ ಕನ್ನಡ ಸಂಘದ ರವೀಂದ್ರ ಪ್ರಸಾದ್, ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ, ಉದ್ಯಮಿ ಪಳನಿಸ್ವಾಮಿ ಮತ್ತಿತರರು ಇದ್ದರು.

ಕಾರ್ಯಕ್ರಮಕ್ಕೂ ಮುನ್ನ ವಿವಿಧ ಕಲಾತಂಡಗಳೊಂದಿಗೆ ಕನ್ನಡಾಂಭೆಯ ಮೆರವಣಿಗೆ ನಡೆಯಿತು.