ಗೋಣಿಕೊಪ್ಪ ವರದಿ, ನ. 19: ಮುಖ್ಯಮಂತ್ರಿ ವಿಶೇಷ ಪ್ಯಾಕೇಜ್‍ನಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ನಡೆಯುತ್ತಿರುವ ಗೋಣಿಕೊಪ್ಪ ಬೈಪಾಸ್ ರಸ್ತೆ ಅಭಿವೃದ್ಧಿ ಕಾರ್ಯಕ್ರಮವನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಪರಿಶೀಲನೆ ನಡೆಸಿದರು.

ಗ್ರಾಮ ಪಂಚಾಯಿತಿಯ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾಗಿದ್ದ ರೂ. 35 ಲಕ್ಷ ಅನುದಾನದ 10 ಲಕ್ಷ ಹಣದಲ್ಲಿ ಕಾಮಗಾರಿ ವೀಕ್ಷಿಸಿದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕಾರ್ಯದರ್ಶಿ ಕಾಡ್ಯಮಾಡ ಚೇತನ್, ಪಂಚಾಯಿತಿ ಸದಸ್ಯರುಗಳಾದ ಪ್ರಮೋದ್ ಗಣಪತಿ, ಜಮ್ಮಡ ಸೋಮಣ್ಣ, ಮುರುಗ, ಬಿ.ಎನ್. ಪ್ರಕಾಶ್, ನಗರ ಕಾಂಗ್ರೆಸ್ ನಗರ ಅಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ, ಕಾರ್ಯದರ್ಶಿ ಸಲಾಂ ಹಾಗೂ ಪಿಡಿಓ ಚಂದ್ರಮೌಳಿ ಪಾಲ್ಗೊಂಡಿದ್ದರು. ಈ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸೀತಾರಾಮ್ ಹಲವು ತಿಂಗಳ ಹಿಂದೆ ಭೂಮಿಪೂಜೆ ನೆರವೇರಿಸಿದ್ದರು.