ಕುಶಾಲನಗರ, ನ 22: ಕುಶಾಲನಗರವನ್ನು ಕೇಂದ್ರವಾಗಿಸಿ ಕೊಂಡು ನೂತನ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಸರಣಿ ಧರಣಿಯಲ್ಲಿ ಕುಶಾಲನಗರದ ಮಹಿಳಾ ಭಜನಾ ಮಂಡಳಿ ಒಕ್ಕೂಟದ ಆಶ್ರಯದಲ್ಲಿ ಧರಣಿ ನಡೆಯಿತು.

ಪಟ್ಟಣದ ಕಾರು ನಿಲ್ದಾಣದ ಗುಂಡುರಾವ್ ಸತ್ಯಾಗ್ರಹ ವೇದಿಕೆಯಲ್ಲಿ ಧರಣಿ ನಡೆಸಿದ ವಿವಿಧ ಭಜನಾ ಮಂಡಳಿಗಳ ಪದಾಧಿಕಾರಿಗಳು ತಾಲೂಕು ರಚನೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭ ಒಕ್ಕೂಟದ ಪ್ರಮುಖರಾದ ಗೀತಾ ರಾಧಾಕೃಷ್ಣ, ಶೈಲಜಾ ಚಿನ್ನಸ್ವಾಮಿ, ಪದ್ಮಾ ಪುರುಷೋತ್ತಮ್, ಲತಾ ರಮೇಶ್, ರಮಾ ವಿಜಯೇಂದ್ರ, ರಜನಿ ಪ್ರದೀಪ್ ಮತ್ತು ಕಾವೇರಿ ಹೋರಾಟ ಸಮಿತಿ ಪ್ರಮುಖರು ಇದ್ದರು.