ಮಡಿಕೇರಿ, ನ. 22: 62ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ವೀರಾಜಪೇಟೆ ಕರ್ನಾಟಕ ಸಂಘದ ವತಿಯಿಂದ ಆಯೋಜಿಸಿದ ಜಿಲ್ಲಾಮಟ್ಟದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ದೇಶಭಕ್ತಿ ಗೀತೆಗಳ ಸಾಮೂಹಿಕ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಚಲನಚಿತ್ರ ಗೀತೆಯಲ್ಲಿ ದ್ವಿತೀಯ ಮತ್ತು ಜನಪದ ಗೀತೆಯಲ್ಲಿ ತೃತೀಯ ಸ್ಥಾನವನ್ನು ಕಾವೇರಿ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲಿನ ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ. ದಿನೇಶ್, ಕಾರ್ತಿಕ್, ಅಶೋಕ್, ಚೇತನ್, ಹೃಷಿಪಾರ್ವತಿ, ಶೃತಿ, ಸಂದ್ಯಾ, ಹೇಮ, ಭವನ್‍ಕುಮಾರ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.