ಕೂಡಿಗೆ, ನ. 23: ಕೂಡಿಗೆ ಗ್ರಾಮ ಪಂಚಾಯಿತಿಯ ಈಗಿನ ಕಟ್ಟಡದ ಮೇಲಂತಸ್ತಿನ ಕಟ್ಟಡ ಕಾಮಗಾರಿಗೆ ಭೂಮಿಪೂಜೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ನೆರವೇರಿಸಿದರು. ನಂತರ ಮಾತನಾಡಿದ ಅವರು, ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಗ್ರಾಮ ಪಂಚಾಯಿತಿಗೆ ಬಂದ ಪುರಸ್ಕಾರದ ಹಣದಲ್ಲಿ ಅದರ ಸವಿನೆನಪಿಗೆ ಗ್ರಾ.ಪಂ.ನ ಮೇಲಂತಸ್ತಿನ ಕಟ್ಟಡವನ್ನು ಕಟ್ಟಲು ತೀರ್ಮಾನಿಸಲಾಗಿದ್ದು, ಇದರಲ್ಲಿ ಕಚೇರಿಗೆ, ಸಭೆ ನಡೆಸಲು ಅನುಕೂಲವಾಗುವಂತಹ ಕೊಠಡಿಗಳನ್ನು ನಿರ್ಮಾಣ ಮಾಡಲಾಗುವದು. ಮೊದಲ ಹಂತವಾಗಿ ರೂa. 4 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವದು ಎಂದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ವೈ. ರವಿ, ಟಿ.ಕೆ. ವಿಶ್ವನಾಥ್, ಮಂಜಯ್ಯ, ರಾಮಚಂದ್ರ, ಕಲ್ಪನ, ಪುಷ್ಪ, ರತ್ನಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವಾಮಿನಾಯಕ್ ಮತ್ತು ಸಿಬ್ಬಂದಿ ವರ್ಗ ಇದ್ದರು.