ಕೂಡಿಗೆ, ನ. 25: ಕುಶಾಲನಗರ ಹೋಬಳಿಯ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಹಾಗೂ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಬಸವನಹಳ್ಳಿ ಆದಿವಾಸಿಗಳ ಪುನರ್ವಸತಿ ಕೇಂದ್ರಕ್ಕೆ ಸೋಮವಾರಪೇಟೆ ತಾಲೂಕು ಪಂಚಾಯಿತಿ ಮಾಸಿಕ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಸದಸ್ಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಕಾಮಗಾರಿಯನ್ನು ಮತ್ತು ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯರಾದ ಸಬಿತ ಚನ್ನಕೇಶವ, ಗಂಗಮ್ಮ, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಸಮಾಜ ಕಲ್ಯಾಣಾಧಿಕಾರಿ ಚಿಕ್ಕ ಬಸವಯ್ಯ, ಗಿರಿಜನ ಕಲ್ಯಾಣ ವಿಸ್ತರಣಾಧಿಕಾರಿ ಧರ್ಮಮ್ಮ, ಸಹಾ ಯಕ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಸೇರಿದಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.