ಕುಶಾಲನಗರ, ನ. 25: ಕುಶಾಲನಗರವನ್ನು ಕೇಂದ್ರವಾಗಿಸಿಕೊಂಡು ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿಂದು ಅಹಿಂದ ಒಕ್ಕೂಟದ ಆಶ್ರಯದಲ್ಲಿ ಧರಣಿ ನಡೆಯಿತು. ಒಕ್ಕೂಟದ ಅಧ್ಯಕ್ಷ ಎಂ.ಕೆ.ಹಮೀದ್ ನೇತೃತ್ವದಲ್ಲಿ ನಡೆದ ಧರಣಿ ಸಂದರ್ಭ ಸಂಘದ ಪದಾಧಿಕಾರಿಗಳು, ಸದಸ್ಯರು ತಾಲೂಕು ರಚನೆಗೆ ಆಗ್ರಹಿಸಿ ಘೋಷಣೆ ಕೂಗಿದರು. ಕೆಲಕಾಲ ಮಾನವ ಸರಪಳಿ ರಚಿಸುವ ಮೂಲಕ ನೂತನ ತಾಲೂಕು ಆಗ್ರಹ ವ್ಯಕ್ತಪಡಿಸಿದರು.

ಪಟ್ಟಣದ ಕಾರು ನಿಲ್ದಾಣದಲ್ಲಿನ ಗುಂಡುರಾವ್ ಸತ್ಯಾಗ್ರಹ ವೇದಿಕೆಯಲ್ಲಿ ನಡೆದ ಧರಣಿಯಲ್ಲಿ ಒಕ್ಕೂಟದ ಉಪಾಧ್ಯಕೆÀ್ಷ ರಾಧಾ ಪುಟ್ಟರಾಜು, ಕಾರ್ಯದರ್ಶಿ ಅಬ್ದುಲ್ ಅಜೀಜ್, ಖಜಾಂಚಿ ಅಬ್ದುಲ್ ಮನಾಫ್, ಯೂಸಫ್, ಅಸ್ಮ, ಕುಶಾಲಕುಮಾರಿ, ಹೋರಾಟ ಸಮಿತಿ ಪ್ರಮುಖರು ಇದ್ದರು.