ಆಲೂರುಸಿದ್ಧಾಪುರ, ನ. 26: ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಸಂಘದಿಂದ ಶನಿವಾರಸಂತೆಯಲ್ಲಿ ಹಮ್ಮಿಕೊಳ್ಳಲು ಉದ್ದೆಶಿಸಿರುವ ಸತ್ಯ ನಾರಾಯಣ ಪೂಜೆಯ ಪೂರ್ವಭಾವಿ ಸಭೆ ಶನಿವಾರಸಂತೆ ನಂದೀಶ್ವರ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಶನಿವಾರಸಂತೆ ವಲಯ ಮೇಲ್ವಿಚಾರಕ ಸುಬ್ರಮಣಿ ಅವರ ನೇತೃತ್ವದಲ್ಲಿ ಶನಿವಾರ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸುಬ್ರಮಣಿ ಶನಿವಾರಸಂತೆಯಲ್ಲಿ ಡಿ. 24ರಂದು ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶನಿವಾರಸಂತೆ ಗ್ರಾ.ಪಂ. ಉಪಾಧÀ್ಯಕ್ಷೆ ಗೀತಾ ಹರೀಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಭುವನೇಶ್ವರಿ ಹರೀಶ್, ಮಂಜುನಾಥ್, ಸೇವಾ ನಿರತರಾದ ಪವನ್, ಶೋಭ, ನಳಿನಿ, ಯಶೋದ, ಶೈಲ, ಸಾಹೀನ್ ತಾಜ್, ಪುಷ್ಪ ಮುಂತಾದವÀರಿದ್ದರು.

ಇದೆ ಸಂದರ್ಭದಲ್ಲಿ ವಿವಿದ ಜವಾಬ್ದಾರಿಗಳನ್ನು ಸಂಘದ ಸದಸ್ಯರಿಗೆ ನೀಡಲಾಯಿತು.