ಮಡಿಕೇರಿ, ನ. 26: ನಗರಸಭೆಯ ಹತ್ತಿರವಿರುವ ಯುದ್ಧ ಸ್ಮಾರಕದ ಆವರಣದಲ್ಲಿ ಡಿ. 7 ರಂದು ಬೆಳಿಗ್ಗೆ 10 ಗಂಟೆಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭ ನಡೆಯಲಿದೆ. ಇದರಲ್ಲಿ ಬ್ರೀಗೆಡಿಯರ್ ಎಂ.ಎನ್. ಕುಟ್ಟಯ್ಯ (ನಿವೃತ್ತ) ಮುಖ್ಯ ಅತಿಥಿಗಳಾಗಿ ಆಗಮಿಸಿ ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲೆಯ ಸಮಸ್ತ ಸಾರ್ವಜನಿಕರು, ಮಾಜಿ ಯೋಧರು ಹಾಗೂ ಅವರ ಕುಟುಂಬದವರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.