ಸಿದ್ದಾಪುರ, ನ. 27: ಕಳೆದ 20 ವರ್ಷಗಳಿಂದಲೂ ಓಡಾಡಲು ಸಮರ್ಪಕವಾದ ರಸ್ತೆ ಇಲ್ಲದೇ ಸಂಕಷ್ಟದಲ್ಲಿ ಬದುಕುತ್ತಿರುವ ಬಜೆಕೊಲ್ಲಿ ಪೈಸಾರಿಯ ನಿವಾಸಿಗಳು ಜಿಲ್ಲಾಡಳಿತ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ ಗ್ರಾಮದ ಬಜೆಕೊಲ್ಲಿ ಪೈಸಾರಿಯಲ್ಲಿ 40 ಕ್ಕೂ ಅಧಿಕ ಕಡುಬಡ ಕುಟುಂಬಗಳು ವಾಸಮಾಡಿಕೊಂಡಿದ್ದು. ಈ ಮಂದಿ ಓಡಾಡುವ ರಸ್ತೆ ಇಕ್ಕಟ್ಟಿನಿಂದ ಕೂಡಿದ್ದು ವಾಹನ ಸಂಚರಿಸಲು ಸಾಧ್ಯವಿಲ್ಲದಂತಾಗಿದೆ.

ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಭೇಟಿ ನೀಡಿ ಪರಿಶೀಲಿ ಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಸಿ. ಹಸೈನಾರ್ ಹಾಜಿ, ಬಜೆಕೊಲ್ಲಿ ಪೈಸಾರಿಗೆ ತೆರಳುವ ರಸ್ತೆಯು ಇಕ್ಕಟ್ಟಾಗಿದ್ದು. ರಸ್ತೆ ಅಗಲೀಕರಣಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದು ಸಮಸ್ಯೆಯನ್ನು ಬಗೆಹರಿಸು ವದಾಗಿ ಭರವಸೆ ನೀಡಿದರು. ಈ ಸಂದರ್ಭ ಅದ್ರುಮಾನ್, ಯೋಗೇಶ್ ಇತರರು ಹಾಜರಿದ್ದರು.