ಮಡಿಕೇರಿ, ನ. 28: ಡಿಸೆಂಬರ್ 1ರಂದು ಪೂರ್ವಾಹ್ನ 11 ಗಂಟೆಗೆ ಮಡಿಕೇರಿಯ ಬಾಲಭವನದಲ್ಲಿ ಮಡಿಕೇರಿ ತಾಲೂಕು ಹಾಗೂ ನಗರ ಬಿಜೆಪಿ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಅಪ್ಪಚ್ಚುರಂಜನ್ ಹಾಗೂ ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ರಾಜ್ಯ ಸಮಿತಿ ಸದಸ್ಯ ಮನುಮುತ್ತಪ್ಪ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ತಳೂರು ಎ. ಕಿಶೋರ್‍ಕುಮಾರ್ ತಿಳಿಸಿದ್ದಾರೆ.