ಮೂರ್ನಾಡು, ಡಿ. 22: ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಇತ್ತೀಚೆಗೆ ಮೈಸೂರು ಸೆಂಟ್ ಜೋಸೆಫ್ ಶಾಲೆಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದರು. ಕಾಲೇಜಿನ ದೈಹಿಕ ಶಿಕ್ಷಕ ಮಂಜುನಾಥ್, ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ, ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ ಹಾಗೂ ಕಾಲೇಜು ಪ್ರಾಂಶುಪಾಲೆ ಪಿ.ಎಂ. ದೇವಕಿ ಪ್ರತಿನಿಧಿಸಿದ ವಿದ್ಯಾರ್ಥಿ ತಂಡದೊಂದಿಗೆ ಇದ್ದಾರೆ.