ಮಡಿಕೇರಿ, ಡಿ. 22: ಮಡಿಕೇರಿ ನಗರದ ಶ್ರೀ ಚೌಡೇಶ್ವರಿ ಗೌಡ ಕೂಟದ 7ನೇ ವರ್ಷದ ಸಂತೋಷ ಕೂಟ ಮತ್ತು ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಮೇಲಿನ ಗೌಡ ಸಮಾಜದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಚೌಡೇಶ್ವರಿ ಗೌಡ ಕೂಟದ ಅಧ್ಯಕ್ಷ ಕುದುಪಜೆ ಆನಂದ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಚೌಡೇಶ್ವರಿ ಗೌಡ ಕೂಟದ ಸದಸ್ಯ ಕೂಡಕಂಡಿ ಡಾ. ದಯಾನಂದ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು, ನಮ್ಮ ಜನಾಂಗದ ಅಭಿವೃದ್ಧಿಗೆ ಪ್ರಯತ್ನ ಪಡಬೇಕು. ಎಲ್ಲರೂ ನಮ್ಮ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಮೊದಲ ಆದ್ಯತೆಯನ್ನು ನೀಡಿ ಅವರನ್ನು ರಾಷ್ಟ್ರದ ಆಸ್ತಿಯಾಗಿ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಚೌಡೇಶ್ವರಿ ಗೌಡ ಕೂಟದ ಕಾರ್ಯದರ್ಶಿ ಆನಂದ, ಖಜಾಂಚಿ ಜಗದೀಶ್, ಉಪಾಧ್ಯಕ್ಷ ಸೂದನ ಹರೀಶ್, ಕೋಡಿ ಚಂದ್ರಶೇಖರ್ ಹಾಜರಿದ್ದರು. ಕಾರ್ಯಕ್ರಮದಲ್ಲಿ ಕೂಟದ ಮಕ್ಕಳಿಗೆ ಮತ್ತು ಸದಸ್ಯರಿಗೆ ಕ್ರೀಡಾ ಚಟುವಟಿಕೆಗಳು ಮತ್ತು ಸಾಂಸ್ಕøತಿಕ ಚಟುವಟಿಕೆಗಳನ್ನು ಏರ್ಪಡಿಸಲಾಯಿತು. ಎಸ್.ಎಸ್.ಎಲ್.ಸಿ., ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕಗಳಿಸಿದ ಸಂಘದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.