ಕೂಡಿಗೆ, ಡಿ. 23: ಕುಶಾಲನಗರದ ಮುಖ್ಯ ರಸ್ತೆಯಲ್ಲಿ ಪಾದಾಚರಿಯೋರ್ವರು ರಸ್ತೆ ದಾಟುವ ಸಂದರ್ಭ ಆಟೋವೊಂದು ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಶಾಲನಗರ ಜನತಾ ಕಾಲೋನಿ ನಿವಾಸಿ ರಾಜು (50) ಎಂಬವರೆ ಸಾವನ್ನಪ್ಪಿರುವ ದುರ್ದೈವಿ. ಮೃತ ರಾಜು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಆಟೋ (ಕೆ.ಎ.12.ಬಿ.3929) ಚಾಲಕ ದಿನೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.