ಕೂಡಿಗೆ, ಡಿ. 23: ಕೂಡಿಗೆಯ ಶ್ರೀ ಸತ್ಯನಾರಾಯಣ ವ್ರತಾಚರಣಾ ಸಮಿತಿಯ ವತಿಯಿಂದ ಶ್ರೀ ಉದ್ಬವ ಸುಬ್ರಹ್ಮಣ್ಯ ದೇವಾಲಯದ ಆವರಣದಲ್ಲಿ ಕಿರುಷಷ್ಠಿಯ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ತಾ. 24 ರಂದು (ಇಂದು) ನಡೆಯಲಿದೆ. ಇದರ ಅಂಗವಾಗಿ ಶ್ರೀ ಸ್ವಾಮಿಗೆ ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ, ನವಗ್ರಹ ಪೂಜೆ, ಅಭಿಷೇಕ ನಡೆಯಲಿದೆ.

10 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ನಂತರ ಮಹಾಮಂಗಳಾರತಿ ಪ್ರಸಾದ ವಿತರಣೆ ಕಾರ್ಯಕ್ರಮ ನೆರವೇರಲಿದೆ.

ಪೂಜೆಯ ಅಂಗವಾಗಿ ಅನ್ನ ಸಂತರ್ಪಣೆ, ಸಂಜೆ 6.45 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.