ಮಡಿಕೇರಿ, ಡಿ. 23: ಕೌಶಲ್ಯ ಅಭಿವೃದ್ಧಿ ಉದ್ಯಮಶೀಲ ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯ, ಮಡಿಕೇರಿ ನೆಹರು ಯುವ ಕೇಂದ್ರ, ತಾಲೂಕು ಯುವ ಒಕ್ಕೂಟ, ಸುಭಾಶ್ ಯುವ ಸಮಿತಿ ಸುಭಾಶ್‍ನಗರ, ಭಾರತೀಯ ಮಜ್ದೂರ್ ಸಂಘ ಕೊಡಗು, ಮೇಕೇರಿ ಗಣೇಶ್ ಸೇವಾ ಸಮಿತಿ, ಅಟಲ್ ಬಿಹಾರಿ ವಾಜಪೇಯಿ ಹೆಲ್ತ್‍ಲೈನ್, ಛತ್ರಪತಿ ಸ್ವಸಹಾಯ ಸಂಘ, ರೋಟರಿ ಸಮುದಾಯ ದಳ, ಗ್ರಾಮ ಪಂಚಾಯಿತಿ, ಶಾಲಾಭಿವೃದ್ಧಿ ಸಮಿತಿ, ಸ್ವಾಗತ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಉತ್ತಮ ಆಡಳಿತ ದಿನದ ಪ್ರಯುಕ್ತ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ತಾ. 25 ರಂದು ಬೆಳಿಗ್ಗೆ 9 ಗಂಟೆಗೆ ಮೇಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ, ಡಿ.ವೈ.ಎಸ್.ಪಿ. ಸುಂದರ್ ರಾಜ್, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ತಾ.ಪಂ. ಸದಸ್ಯೆ ಕುಮುದಾ ರಶ್ಮಿ, ಮೇಕೇರಿ ಗ್ರಾ.ಪಂ. ಅಧ್ಯಕ್ಷೆ ಕೆ.ಕೆ. ಜಯಂತಿ ಇತರರು ಭಾಗವಹಿಸಲಿದ್ದಾರೆ.