ಕುಶಾಲನಗರ, ಜ. 22: ತಾ. 26 ರಂದು ನವ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‍ಗೆ ಜಿಲ್ಲೆಯ ವಿದ್ಯಾರ್ಥಿನಿ ಅಯ್ಯಂಡ್ರ ಚಿಂತನಾ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಸೇವಾ ಯೋಜನಾ ಕರ್ನಾಟಕ ರಾಜ್ಯದ 14 ಮಂದಿಯ ತಂಡ ಪಥಸಂಚಲನದಲ್ಲಿ ಭಾಗವಹಿಸಲಿದ್ದು ಮಂಗಳೂರು ವಿಶ್ವವಿದ್ಯಾನಿಲಯದ 7 ಮಂದಿ ಆಯ್ಕೆಯಾಗಿದ್ದಾರೆ.

ಚಿಂತನಾ ಕುಶಾಲನಗರದ ಉದ್ಯಮಿ ಅಯ್ಯಂಡ್ರ ಧನು ಮತ್ತು ರೇಣುಕಾ ದಂಪತಿಗಳ ಪುತ್ರಿ. ಪ್ರಸ್ತುತ ಮಂಗಳೂರಿನ ರೋಶನಿ ಕಾಲೇಜಿನಲ್ಲಿ 2ನೇ ವರ್ಷದ ಬಿಎಸ್‍ಡಬ್ಲ್ಯು ವ್ಯಾಸಂಗ ಮಾಡುತ್ತಿದ್ದಾರೆ.