ಕುಶಾಲನಗರ, ಫೆ. 10: ಕುಶಾಲನಗರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸ್ಥಳೀಯ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರ ನಿಯೋಗ ಶುಕ್ರವಾರ ಬೆಂಗಳೂರಿಗೆ ತೆರಳಿ ಸಂಬಂಧಿಸಿದ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೇಣುಕಾ ನೇತೃತ್ವದಲ್ಲಿ ಸದಸ್ಯರು ಬೆಂಗಳೂರಿನಲ್ಲಿ ಸಚಿವರಾದ ರೋಷನ್ ಬೇಗ್, ಪ್ರಮೋದ್ ಮಧ್ವರಾಜ್ ಅವರುಗಳನ್ನು ಭೇಟಿ ಮಾಡಿ ಕುಶಾಲನಗರ ಪಟ್ಟಣದ ನೋಟಿಫೈಡ್ ಏರಿಯಾದಲ್ಲಿ ನಿವಾಸಿಗಳಿಗೆ ಖಾತೆ ಸಂಬಂಧ ಉಂಟಾಗಿರುವ ಸಮಸ್ಯೆ ಹಾಗೂ ಕುಶಾಲನಗರ ಪಟ್ಟಣದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮುಂತಾದ ಯೋಜನೆಗಳ ಬಗ್ಗೆ ಸಚಿವರಿಗೆ ಮನವಿ ಮಾಡಲಾಯಿತು. ಇದೇ ಸಂದರ್ಭ ಪೌರಾಡಳಿತ ಇಲಾಖೆ ಅಧಿಕಾರಿಗಳನ್ನು ನಿಯೋಗ ಭೇಟಿ ಮಾಡಿ ಪಟ್ಟಣಕ್ಕೆ ಬೇಕಾದ ತುರ್ತು ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

ನಿಯೋಗದಲ್ಲಿ ಸ್ತಾಯಿ ಸಮಿತಿ ಅಧ್ಯಕ್ಷರುಗಳಾದ ಹೆಚ್.ಡಿ. ಚಂದ್ರು, ಹೆಚ್.ಕೆ. ಪಾರ್ವತಿ, ಸದಸ್ಯರುಗಳಾದ ಫಜಲುಲ್ಲಾ, ಪ್ರಮೋದ್ ಮುತ್ತಪ್ಪ, ಕವಿತಾ, ಕಾನೂನು ಸಲಹೆಗಾರ ಆರ್.ಕೆ. ನಾಗೇಂದ್ರ, ಮುಖ್ಯಾಧಿಕಾರಿ ಎ.ಎಂ. ಶ್ರೀಧರ್ ತೆರಳಿದ್ದರು.