ಕುಶಾಲನಗರ, ಫೆ. 10: ಗುಮ್ಮನಕೊಲ್ಲಿಯ ಬಸವೇಶ್ವರ ಯುವಕ ಸಂಘದ ಆಶ್ರಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ 6ನೇ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ಬಸವೇಶ್ವರ ಕಪ್’ ತಾ. 11 ರಿಂದ 3 ದಿನಗಳ ಕಾಲ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಹೆಚ್. ಮಣಿ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಮ್ಮನಕೊಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ. ಸೂಪರ್ 8 ಮಾದರಿಯ ಪಂದ್ಯಾಟದ ವಿಜೇತರಿಗೆ ಪ್ರಥಮ ಬಹುಮಾನವಾಗಿ ರೂ. 20 ಸಾವಿರ ನಗದು, ದ್ವಿತೀಯ ಬಹುಮಾನವಾಗಿ ರೂ. 10 ಸಾವಿರ ನಗದು ಹಾಗೂ ಟ್ರೋಫಿಗಳನ್ನು ನೀಡಲಾಗುವದು. ಬೆಸ್ಟ್ ಟೀಮ್, ಬೆಸ್ಟ್ ಬೌಲರ್, ಬೆಸ್ಟ್ ಬ್ಯಾಟ್ಸ್‍ಮೆನ್, ಬೆಸ್ಟ್ ಫೀಲ್ಡರ್, ಬೆಸ್ಟ್ ಆಲ್‍ರೌಂಡರ್, ಬೆಸ್ಟ್ ಕೀಪರ್ ಬಹುಮಾನಗಳನ್ನು ನೀಡಲಾಗುವದು ಎಂದು ಮಾಹಿತಿ ನೀಡಿದರು. ಹೆಚ್ಚಿನ ಮಾಹಿತಿಗಾಗಿ ಮಣಿ: 9611503110, ಅನುದೀಪ್, 8050328478, ನವೀನ: 9902153147 ಸಂಪರ್ಕಿಸಲು ಅವರು ಕೋರಿದರು.

ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಧನಪಾಲ, ಕಾರ್ಯದರ್ಶಿ ಆಸಿಫ್, ಸಹ ಕಾರ್ಯದರ್ಶಿ ಅನುದೀಪ್, ಮನೋಹರ್, ಚಂದ್ರು ಇದ್ದರು.