ಮಡಿಕೇರಿ, ಫೆ. 10: ಮೇಕೇರಿಯ ಶ್ರೀ ಗೌರಿ ಶಂಕರ ದೇವಾಲಯದಲ್ಲಿ ತಾ. 13 ರಂದು ಮಹಾ ಶಿವರಾತ್ರಿ ಉತ್ಸವ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಹೊರೆ ಕಾಣಿಕೆ, ಮಧ್ಯಾಹ್ನ ಮಹಾಪೂಜೆ, ಅನ್ನದಾನ ನಡೆಯಲಿದೆ. ಸಂಜೆ ದೇವತಾ ಕಾರ್ಯದೊಂದಿಗೆ ಧಾರ್ಮಿಕ ಸಭೆಯಲ್ಲಿ ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಂ.ಪಿ. ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಪಾಲ್ಗೊಳ್ಳಲಿದ್ದಾರೆ.

ತಾ. 14 ರಂದು ಧಾರ್ಮಿಕ ಕೈಂಕರ್ಯಗಳೊಂದಿಗೆ ಪುತ್ತೂರಿನ ಶ್ರೀಕೃಷ್ಣ ಉಪಾಧ್ಯಾಯ ಉಪನ್ಯಾಸ ನೀಡಲಿದ್ದಾರೆ. ಬಳಿಕ ಅನ್ನದಾನ ನಡೆಯಲಿದೆ. ಶಿವರಾತ್ರಿ ಪ್ರಯುಕ್ತ ದೇವಾಲಯದಲ್ಲಿ ತಾ. 2 ರಿಂದ ದೇವತಾ ಕಾರ್ಯಗಳು ಆರಂಭಗೊಂಡಿದ್ದು, ತಾ. 14 ರಂದು ಸಮಾರೋಪಗೊಳ್ಳುವದರೊಂದಿಗೆ ನಿತ್ಯ ವಿಶೇಷ ಪೂಜೆಗಳು ಜರುಗಲಿವೆ.