ಮಡಿಕೇರಿ, ಫೆ.11 :ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ. ತಾಲ್ಲೂಕು, ಹೋಬಳಿ, ವಲಯ ಸಮಿತಿ ಪದಾಧಿಕಾರಿಗಳ ಸಭೆ ತಾ.13 ರಂದು ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿಯ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ನಡೆಯಲಿದೆ.

ಕೂಟದ ಕಾರ್ಯಾಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಏಪ್ರಿಲ್ ತಿಂಗಳಿನಲ್ಲಿ ಆಯೋಜಿಸಿರುವ ಒಕ್ಕೂಟದ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ. ಎಲ್ಲಾ ಉಪಸಮಿತಿಗಳ ಅಧ್ಯಕ್ಷರುಗಳು, ಸಂಚಾಲಕರು ಹಾಗೂ ಪದಾಧಿಕಾರಿಗಳು ಪಾಲ್ಗೊಳ್ಳುವಂತೆ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ತಿಳಿಸಿದ್ದಾರೆ.