ಸೋಮವಾರಪೇಟೆ, ಫೆ. 18: ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಂತಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸಮೀಪದ ಕಾನ್ವೆಂಟ್‍ಬಾಣೆಯ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆಯ ರಾಷ್ಟ್ರೀಯ ಕಾರ್ಯಕ್ರಮಗಳ ಬಗ್ಗೆ ಅರಿವು ಕಾರ್ಯಾಗಾರ ನಡೆಯಿತು. ಆರೋಗ್ಯ ಇಲಾಖಾ ಕಾರ್ಯಕ್ರಮಗಳ ಬಗ್ಗೆ ಸ್ತ್ರೀ ಶಕ್ತಿ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳಿಗೆ ವೈದ್ಯೆ ಸುಪರ್ಣಾ ಕೃಷ್ಣಾನಂದ ಮಾಹಿತಿ ನೀಡಿದರು. ಪ್ರಮುಖವಾಗಿ ಜಂತುಹುಳು ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಆರೋಗ್ಯ ಇಲಾಖೆಯಿಂದ ನೀಡಲ್ಪಡುವ ಗುಳಿಗೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ವೆಂಕಟೇಶ್, ಅಂಗನವಾಡಿ ಕಾರ್ಯಕರ್ತೆಯರು, ಶಾಂತಳ್ಳಿ ಆರೋಗ್ಯ ಕೇಂದ್ರದ ಶುಶ್ರೂಷಕಿಯರು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.