ಸಿದ್ದಾಪುರ, ಫೆ. 19: ಚೆಟ್ಟಳ್ಳಿ, ವಾಲ್ನೂರು, ನಂಜರಾಯಪಟ್ಟಣ, ಹೊಸಕೋಟೆ, ಗುಡ್ಡೆಹೊಸೂರು, ಕಂಬಿಬಾಣೆ, ಪಂಚಾಯಿತಿಗಳ ವ್ಯಾಪ್ತಿಯ ಜೆ.ಡಿ.ಎಸ್. ಸಮಿತಿಯ ಪದಾಧಿಕಾರಿಗಳ ಸಭೆಯು ತಾ. 20ರಂದು (ಇಂದು) ಸಂಜೆ 5 ಗಂಟೆಗೆ ಹೊಸಪಟ್ಟಣ ಸಮುದಾಯ ಭವನದಲ್ಲಿ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಿ.ಎ. ಜೀವಿಜಯ ಹಾಗೂ ಜೆ.ಡಿ.ಎಸ್. ಪಕ್ಷದ ಜಿಲ್ಲಾ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.