ಸೋಮವಾರಪೇಟೆ, ಫೆ. 20: ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದಿಂದ ಸಮುದಾಯದ ಮೂವರು ಸಾಧಕರನ್ನು ಸನ್ಮಾನಿಸಲಾಯಿತು.

ನೇರುಗಳಲೆ ಸರ್ಕಾರಿ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ನೂತನ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಆದಿಚುಂಚನಗಿರಿ ಮಠಾಧೀಶ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕಾರ್ಯದರ್ಶಿ ಶ್ರೀ ಶಂಬುನಾಥ ಸ್ವಾಮೀಜಿ, ನೇರುಗಳಲೆ ಪ್ರೌಢಶಾಲೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎನ್. ಪಾಪಯ್ಯ, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕಿ ಕೆ.ಎನ್. ಕಮಲ, ಕಾಫಿ ಬೆಳೆಗಾರರ ಸಂಘದ ನಿರ್ದೇಶಕ ಹೆಚ್.ಸಿ. ಮಾದಪ್ಪ ಅವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಮಾಜಿ ಸಚಿವ ಬಿ.ಎ. ಜೀವಿಜಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದ ಅಧ್ಯಕ್ಷ ವಿನೋದ್ ಕುಮಾರ್, ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ತಿಮ್ಮಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.