ಕುಶಾಲನಗರ, ಫೆ. 20: ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ವತಿಯಿಂದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ನಡೆಯಿತು. ಬಾಲಕಿಯರ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿರುತೆರೆ ನಿರ್ಮಾಪಕ ಉಮಾಶಂಕರ್ ಗುರುತಿನ ಚೀಟಿ ವಿತರಿಸಿದರು.ದಲಿತ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಬಿ.ಡಿ. ಅಣ್ಣಯ್ಯ, ಪ್ರೆಸ್ ಕ್ಲಬ್ ಟ್ರಸ್ಟ್ ಅಧ್ಯಕ್ಷ ಹೆಚ್.ಎಂ. ರಘು, ಗೌರವಾಧ್ಯಕ್ಷ ಟಿ.ಆರ್. ಪ್ರಭುದೇವ್, ಶಾಲಾ ಮುಖ್ಯ ಶಿಕ್ಷಕಿ ಬಿ.ಆರ್. ಪುಷ್ಪಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಪಿ. ನಾಗೇಶ್ ಮತ್ತಿತರರು ಇದ್ದರು.