ನಾಪೋಕ್ಲು, ಫೆ. 20: ಸಮೀಪದ ಕಾರುಗುಂದ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಗೋದಾಮು ಮತ್ತು ಸಹಕಾರ ಭವನ ಕಟ್ಟಡದ ಉದ್ಘಾಟನೆ ತಾ. 25ರಂದು ನಡೆಯಲಿದೆ. ಸಹಕಾರ ಭವನವನ್ನು ಶಾಸಕ ಕೆ.ಜಿ.ಬೋಪಯ್ಯ, ಗೋದಾಮು ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಗೋದಾಮು ಎರಡನೇ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾರಾಟ ವಿಭಾಗದ ಉದ್ಘಾಟನೆಯನ್ನು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಉದ್ಘಾಟಿಸಲಿದ್ದಾರೆ. ಕಾರುಗುಂದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಪಂಡ ಎ. ರ್ಯಾಲಿ ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್, ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹರೀಶ್ ಪೂವಯ್ಯ, . ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಮನುಮುತ್ತಪ್ಪ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬಾಂಡ್ ಗಣಪತಿ, ಕೆಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತೀಂದ್ರ ಮತ್ತಿತರರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಪಟ್ಟಮಾಡ ನಾಣಯ್ಯ, ಪೊಡನೋಳಂಡ ಸುಬ್ಬಯ್ಯ, ತೇಲಪಂಡ ಇ. ಅಪ್ಪಯ್ಯ, ಬಿದ್ದಂಡ ಎಸ್. ಕಾಳಪ್ಪ, ಕೊಡಪಾಲು ಎಸ್. ಗಣಪತಿ, ತೇಲಪಂಡ ಎಂ.ನಂಜಪ್ಪ, ಕೊಡಗನ ಮೊಣ್ಣಪ್ಪ ಹಾಗೂ ಸಂಘದ ಹಿರಿಯ ಸದಸ್ಯ ಶತಾಯುಷಿ ಅಜ್ಜೆಟ್ಟೀರ ಅಯ್ಯಪ್ಪ ಅವರನ್ನು ಸನ್ಮಾನಿಸಲಾಗುವದು.