ಸೋಮವಾರಪೇಟೆ,ಫೆ.20: ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಸಮೀಪದ ಕಲ್ಕಂದೂರು ಅಂಗನವಾಡಿ ಕೇಂದ್ರದಲ್ಲಿ ‘ತೆರೆದ ಮನೆ’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ವೆಂಕಟೇಶ್ ವಹಿಸಿದ್ದರು. ಸೋಮವಾರಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಕುಮಾರ್ ಮತ್ತು ಅಪ್ಸಾನ ಅವರುಗಳು ಭಾಗವಹಿಸಿ ಫೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರೆ, ಮಕ್ಕಳ ಸಹಾಯವಾಣಿ ಕೇಂದ್ರದ ಬಗ್ಗೆ ಚೈಲ್ಡ್‍ಲೈನ್‍ನ ಕಾರ್ಯಕರ್ತೆ ಶೋಭಾ ಲಕ್ಷ್ಮೀ ಮಾಹಿತಿ ಒದಗಿಸಿದರು.

ಬಾಲ್ಯ ವಿವಾಹ ತಡೆ ಕಾಯ್ದೆ ಬಗ್ಗೆ ಬಿ.ಕೆ. ಕುಮಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗೊಂಚಲು ಸಭೆಯ ಅಧ್ಯಕ್ಷೆ ಮಮತ, ಉಪಾಧ್ಯಕ್ಷೆ ಶಶಿಕಲಾ, ಚೈಲ್ಡ್‍ಲೈನ್‍ನ ಕುಸುಮ, ನಯನ್‍ಕುಮಾರ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ತ್ರೀಶಕ್ತಿ ಸಂಘಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.