ಮಡಿಕೇರಿ, ಫೆ. 20 : ಮೊಗೇರ ಸೇವಾ ಸಮಾಜದ ಸೋಮವಾರಪೇಟೆ ತಾಲೂಕು ಸಮಿತಿಯನ್ನು ಪುನರ್ ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ದಾಮೋದರ್ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ರಾಮಚಂದ್ರ, ಕಾರ್ಯದರ್ಶಿಯಾಗಿ ಪಿ.ಕೆ. ನಾರಾಯಣ, ಸಹಕಾರ್ಯದರ್ಶಿಯಾಗಿ ಗಣೇಶ್, ಖಜಾಂಚಿಯಾಗಿ ಕೆ.ಎ.ದಿನೇಶ್ ಹಾಗೂ ಹಿರಿಯ ಸಲಹೆಗಾರರಾಗಿ ಕೆ.ಬಿ.ನಂದ ಅವರನ್ನು ಆಯ್ಕೆ ಮಾಡಲಾಗಿದೆ. ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಬಿ.ಶಿವಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಜಿ. ಚಂದ್ರ, ಖಜಾಂಚಿ ಮಂಜು, ಮಡಿಕೇರಿ ತಾಲೂಕು ಅಧ್ಯಕ್ಷ ಸುರೇಶ, ಸದಸ್ಯರಾದ ಜನಾರ್ಧನ್ ಹಾಗೂ ಆನಂದ ಉಪಸ್ಥಿತರಿದ್ದರು.