ವೀರಾಜಪೇಟೆ, ಫೆ. 21 : ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡಾನೆ ಸೇರಿದಂತೆ ಅಪಾಯಕಾರಿ ಕಾಡು ಪ್ರಾಣಿಗಳ ಹಾವಳಿಯ ಕುರಿತು ಸರಕಾರದ ಗಮನ ಸೆಳೆಯಲು ಜಿಲ್ಲೆಯ ಬೆಳೆಗಾರರು, ರೈತರು ಹಾಗೂ ಕಾರ್ಮಿಕರು ತಾ. 23 ರಂದು ಮಡಿಕೇರಿಯಲ್ಲಿ ಆಯೋಜಿಸಿರುವ ಪ್ರತಿಭಟನಾ ಸಭೆಗೆ ಅಖಿಲ ಕೊಡವ ಸಮಾಜ ತನ್ನ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಎಂದು ಅಖಿಲ ಸಮಾಜದ ಗೌ. ಕಾರ್ಯದರ್ಶಿ ಅಮ್ಮಣಿಚಂಡ ರಾಜ ನಂಜಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.