*ಗೋಣಿಕೊಪ್ಪಲ, ಮಾ. 20 : ಮಲೆಯಾಳಿ ಭಾಂದವರಲ್ಲಿ ಕ್ರೀಡಾ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಏಪ್ರಿಲ್ 6 ರಿಂದ 8ರ ತನಕ ಏಳನೇ ವರ್ಷದ ಜಿಲ್ಲಾ ಮಟ್ಟದ ಕೊಡಗು ಮಲೆಯಾಳಿ ಕ್ರಿಕೆಟ್ ಪಂದ್ಯಾಟ ನಡೆಯಲಿದೆ ಎಂದು ಹಿಂದೂ ಮಲೆಯಾಳಿ ಸಂಘದ ನಗರಧ್ಯಾಕ್ಷ ಶರತ್ಕಾಂತ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲಾ ಹಿಂದೂ ಮಲೆಯಾಳಿ ಸಂಘ ಹಾಗೂ ಅಮ್ಮತ್ತಿ ಕಾರ್ಮಾಡು ಜೈ ಶ್ರೀರಾಮ್ ಮಲೆಯಾಳಿ ಸಂಘ ಆಶ್ರಯದಲ್ಲಿ ಈ ಕೀಡಾಕೂಟ ನಡೆಯಲಿದೆ. ಅಮ್ಮತ್ತಿ ಜಿ.ಯಂಪಿ. ಶಾಲಾ ಮೈದಾನದಲ್ಲಿ ನಡೆಯಲಿರುವ ಕ್ರೀಡಾ ಉತ್ಸವಕ್ಕೆ 3 ದಿನಗಳು ಮಲೆಯಾಳಿ ಬಾಂಧವರು ಭಾಗವಹಿಸುವಂತೆ ಕೋರಿದರು. ಸಂಘಟನಾ ಕಾರ್ಯದರ್ಶಿ ರತೀಶ್ ಮಾತನಾಡಿ ಮೂರು ದಿನಗಳ ಕಾಲ ನಡೆಯುವ ಕ್ರೀಡಾ ಉತ್ಸವದಲ್ಲಿ ಸುಮಾರು 45ಕ್ಕೂ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ. ಕಳೆದ ಬಾರಿ 40 ತಂಡಗಳು ಭಾಗವಹಿಸಿದ್ದವು. ಕ್ರಿಕೆಟ್ ಪಂದ್ಯಾಟದ ಕ್ರೀಡಾಪಟುಗಳು ಕಡ್ಡಾಯವಾಗಿ ಹಿಂದೂ ಮಲೆಯಾಳಿ ಜನಾಂಗಕ್ಕೆ ಸೇರಿದವರಾಗಿರಬೇಕು ಎಂದು ಮಾಹಿತಿ ನೀಡಿದರು.
ಕ್ರೀಡಾ ಸಂಚಾಲಕ ಲಿಜೇಶ್ ಮಾತನಾಡಿ ಕ್ರಿಕೆಟ್ ಪಂದ್ಯಾಟ ದೊಂದಿಗೆ ಮಹಿಳೆಯರಿಗೆ ಹಗ್ಗಜಗ್ಗಾಟ, ಸಣ್ಣಮಕ್ಕಳಿಗೆ ಆಟೋಟ ಸ್ಪರ್ಧೆ ಹಾಗೂ ಕೇರಳದ ಸಾಂಪ್ರದಾಯಿಕ ನೃತ್ಯ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತರಾದವರಿಗೆ 25 ಸಾವಿರ ರೂಪಾಯಿ ನಗದು ಹಾಗೂ ಟ್ರೋಫಿ ಮತ್ತು ರನ್ನರ್ಸ್ ವಿಜೇತರಿಗೆ 15 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವದು. ಪಂದ್ಯಾಟದಲ್ಲಿ ಭಾಗವಹಿಸಲು ಇಚ್ಚಿಸುವ ತಂಡಗಳು ತಾ. 28ರ ಒಳಗೆ ತಮ್ಮ ತಂಡದ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ತಿಳಿಸಿದರು. ಹೆಚ್ಚಿನ ಮಾಹಿತಿಗೆ 9741917874, 9686831055 ಸಂಖ್ಯೆಯನ್ನು ಸಂಪರ್ಕಿಸಬಹುದು. ಗೋಷ್ಠಿಯಲ್ಲಿ ಕಾರ್ಯದರ್ಶಿ ರವಿ ಉಪಸ್ಥಿತರಿದ್ದರು.