ಮಡಿಕೇರಿ, ಏ. 2: ಇತ್ತೀಚೆಗೆ ಬಿಜೆಪಿ ಕಚೇರಿಯಲ್ಲಿ ನಡೆದ ಹಿಂದುಳಿದ ವರ್ಗಗಳ ಘಟಕದ ಸಭೆಯಲ್ಲಿ ಯಾವದೇ ರಾಜಕೀಯ ವಿಚಾರಗಳ ಚರ್ಚೆ ನಡೆದಿಲ್ಲ ಎಂದು ಘಟಕದ ಜಿಲ್ಲಾಧ್ಯಕ್ಷ ಆನಂದ್ ರಘು ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ವಿಧಾನಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಮತ್ತಿತರ ನಾಯಕರುಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹಾವೇರಿಯಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶಕ್ಕೆ ತೆರಳುವ ಕುರಿತು ಚರ್ಚಿಸಲಾಯಿತು ಹೊರತು, ಚುನಾವಣಾ ಅಭ್ಯರ್ಥಿಗಳ ಕುರಿತು ಯಾವದೇ ಪ್ರಸ್ತಾಪವಾಗಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.